ಧರ್ಮಸ್ಥಳ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2, ಇಲ್ಲಿ ಆ.14ರಂದು “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಕೆ. ನಂದ ಇವರು ತುಳು ಸಂಪ್ರದಾಯದಂತೆ ಕಲಸೆಯಲ್ಲಿ ತೆಂಗಿನ ಮರದ ಹೊಂಬಾಳೆಯನ್ನು ಅರಳಿಸುವ ಮೂಲಕ ಚಾಲನೆ ನೀಡಿ, ಶುಭವನ್ನು ಹಾರೈಸಿದರು. ವೇದಿಕೆಯಲ್ಲಿದ ಗಣ್ಯರು ಚೆನ್ನೆ ಮಣೆಯ ಆಟದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶಾಲೆಯ ಎಸ್.ಡಿ.ಎಂ.ಸಿ. ಯ ಸದಸ್ಯರಾದ ರೂಪೇಶ್ ಕೆ. ಇವರು “ಆಟಿಡೊಂಜಿ ದಿನ”ದ ವಿಶೇಷತೆಯನ್ನು ತಿಳಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಹರ್ ರಾವ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಹೇಮಲತಾ ಮತ್ತು ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದದವರು, ಅಕ್ಷರದಾಸೋಹ ಸಿಬ್ಬಂದಿ, ಪೋಷಕ ವೃಂದ, ಶಾಲೆಯ ಮಕ್ಕಳು ಉಪಸ್ಥಿತರಿದ್ದರು.
ತುಳು ಹಾಡುಗಳಿಗೆ ಮಕ್ಕಳು ನೃತ್ಯವನ್ನು ಮಾಡಿ ಮನೋರಂಜಿಸಿದರು. ಪೋಷಕರ ಸಹಕಾರದಿಂದ ೩೮ ಬಗೆಯ ಆಟಿ ತಿಂಗಳಲ್ಲಿ ಮಾಡುವ ವಿಶೇಷ ಖಾದ್ಯಗಳನ್ನು, ಹಳೆಯ ಕಾಲದ ವಸ್ತುಗಳು ಜೊತೆಗೆ ಗಿಡಮೂಲಿಕೆಗಳ ಪ್ರದರ್ಶನವು ಈ ಕಾರ್ಯ ಕ್ರಮದ ವಿಶೇಷ ಆಕರ್ಷಣೆ ಯಾಗಿತ್ತು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಸ್ವಾಗತಿಸಿ, ಅಥಿತಿ ಶಿಕ್ಷಕಿ ಶ್ರೀಮತಿ ಭವ್ಯ ವಂದಿಸಿ, ಸಹ ಶಿಕ್ಷಕಿ ಶ್ರೀಮತಿ ಹೇಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.


Discover more from Nammura Suddi
Subscribe to get the latest posts sent to your email.
