ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಬರಾಯಕೆರೆ ಸಂರಕ್ಷಣಾ ಸಮಿತಿ ಆ.20ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ರವರಿಗೆ ಮನವಿ ಸಲ್ಲಿಸಿದರು.ಸ್ಥಳೀಯ ಭೂಮಾಲೀಕ ಶ್ರೀಕಾಂತ್ ಭಟ್ ಎಂಬವರು ಕೃಷಿ ಚಟುವಟಿಕೆ ಕಾರಣ ನೀಡಿ ಕಳೆದ 25ಕ್ಕೂ ಹೆಚ್ಚು ವರ್ಷಗಳಿಂದ ಸತತವಾಗಿ ಗಣಿಗಾರಿಕೆ ನಡೆಸುತ್ತಿದ್ದು, ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸ್ಫೋಟಿಸುತ್ತಿದ್ದಾರೆ ಇದರಿಂದಾಗಿ ಶಾಲೆಯ ಮಕ್ಕಳು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯರ ಮನೆಗಳು ಬಿರುಕು ಬಿಟ್ಟಿದೆ. ಕೃಷಿ ಕೃತಾವಳಿಗಳಿಗೆ ಕಲ್ಲು, ಕಲ್ಲಿನ ಪುಡಿಯಿಂದ ತೊಂದರೆಯಾಗಿದೆ. ಬೃಹತ್ ಗಾತ್ರದ ಲಾರಿಗಳ ಸಂಚಾರದಿಂದ ಗ್ರಾಮ ಪಂಚಾಯತ್ ರಸ್ತೆಗಳು, ಮೋರಿಗಳು ನಾಶಗೊಂಡಿದೆ. ಐತಿಹಾಸಿಕ ಬರಾಯಕೆರೆ ಸಂಪೂರ್ಣ ಕಲುಷಿತಗೊಂಡಿದೆ ಎಂದು ಮನವಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಸಂಬಂಧಪಟ್ಟ ಇಲಾಖೆಗಳಿಗೆ ತಪ್ಪು ಮಾಹಿತಿ ನೀಡಿ ಕೃಷಿ ಚಟುವಟಿಕೆ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಗಣಿಗಾರಿಕೆ ನಡೆಸುತ್ತಿದ್ದರೂ ಯಾವುದೇ ಇಲಾಖೆಗಳು ಕಾನೂನು ಕ್ರಮ ಕೈಗೊಂಡಿಲ್ಲ ಎಂದು ತಮ್ಮ ನೋವು ಜಿಲ್ಲಾಧಿಕಾರಿಗಳ ಮುಂದೆ ತೋಡಿಕೊಂಡರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಶಾಂತ್ ವೇಗಸ್, ಬರಾಯಕೆರೆ ಸಂರಕ್ಷಣಾ ಸಮಿತಿ ಮುಖಂಡರಾದ ಲಿಯೋ ಪಿರೇರಾ, ಹರೀಶ್ ಪೂಜಾರಿ, ಗಣೇಶ್ ದೇವಾಡಿಗ, ಮೇಲ್ವಿನ್ ಡಿ’ಸೋಜ, ಪ್ರವೀಣ್ ನಿನ್ನಿಕಲ್ಲು, ಜೋನ್ ಡಿ’ಸೋಜ, ದಿನೇಶ್ ಪೂಜಾರಿ, ಕೂಸ ಅಳದಂಗಡಿ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಉಪಸ್ಥಿತರಿದ್ದರು.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading