
ಬೆಳ್ತಂಗಡಿ: ಧರ್ಮಸ್ಥಳದಿಂದ ಉಜಿರೆ ಕಡೆ ಸಾಗುವ ರಸ್ತೆಯ ನೀರಚಿಲುಮೆ ಎಂಬಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದ್ದ ಘಟನೆ ಜು.3ರಂದು ನಡೆದಿದೆ.

ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಕನ್ಯಾಡಿ ಕಳೆದು ನೀರಚಿಲುಮೆ ಬರುತ್ತಿರುವ ವೇಳೆ ಎದುರಿನಿಂದ ಬೈಕ್ ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಯತ್ನಿಸುವ ಸಂದರ್ಭ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯ ಚರಂಡಿಗೆ ಇಳಿದಿದೆ. ಘಟನೆಯಿಂದ ಯಾಗಿರೂ ಅಪಾಯಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
