ಬಂದಾರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 5 ಲಕ್ಷ ರೂಪಾಯಿ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ ನಿರ್ಮಿಸಲಾದ ರಿಕ್ಷಾ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಜುಲೈ 21 ರಂದು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಪೆರ್ಲ -ಬೈಪಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಡೀಕಯ್ಯ ಗೌಡ, ಕಾರ್ಯದರ್ಶಿ ಲೋಹಿತ್ ಗೌಡ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹಸಂಚಾಲಕರಾದ ಲೋಕ್ಷತ್ ಗೌಡ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್, ಪ್ರಮುಖರಾದ ಹೊನ್ನಪ್ಪ ಗೌಡ, ಲಿಂಗಪ್ಪ ಗೌಡ, ಆನಂದ ಗೌಡ, ಆಟೋ ಚಾಲಕ-ಮಾಲಕ ವೃಂದ, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Discover more from Nammura Suddi

Subscribe now to keep reading and get access to the full archive.

Continue reading